ಕಡಬ : ಗೋ ಸಾಗಾಟ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರ್ದಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತರು.
ವಿಠಲ ರೈ ಅವರ ಸಂಬಂಧಿಯೋರ್ವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾ.30 ರಂದು ರಾತ್ರಿ
ಮರ್ಧಾಳ ಪೇಟೆಯ ಮಾರ್ಗದ ಬದಿಯಲ್ಲಿ ನಿಂತಿದ್ದ ವಿಠಲ ರೈ ಎಂಬವರಿಗೆ ಮಾರುತಿ 800 ಕಾರನ್ನು ಅದರ ಚಾಲಕ ಅತೀವೇಗ ಮತ್ತು ಅಜಾಗರೂಕತೆಯಿಂದ ಉದ್ದೇಶಪೂರ್ವಕವಾಗಿ ಚಲಾಯಿಸಿಕೊಂಡು ಬಂದು, ರಭಸವಾಗಿ ಡಿಕ್ಕಿ ಹೊಡೆದಿದ್ದು, ಸದ್ರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವಿಠಲ ರೈ ರವರನ್ನು, ಸ್ಥಳೀಯರು ತಕ್ಷಣ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆತಂದಾಗ ಮೃತಪಟ್ಟಿರುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸದ್ರಿ ಅಪಘಾತ ನಡೆದ ವೇಳೆ ಕಾರಿನಲ್ಲಿದ್ದ ಆರೋಪಿಗಳು ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಉದ್ದೇಶಪೂರ್ವಕವಾಗಿ ವಿಠಲ ರೈ ರವರಿಗೆ ಡಿಕ್ಕಿಪಡಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 45/2024 ಕಲಂ : 302 ಜೊತೆಗೆ 34 ಐ ಪಿ ಸಿ ಮತ್ತು ಕಲಂ:4,5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.