ಮಂಗಳೂರು : ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ.
ದ.ಕ. ಹಾಗೂ ಉಡುಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24 ರಂದು ನೋಟ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.


























