Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಸಾಲೆತ್ತೂರು ಕೂಡುರಸ್ತೆ ಚೆಕ್ ಪೋಸ್ಟ್ ಅಕ್ರಮ ವ್ಯವಹಾರಿಗಳಿಗೆ ರಹದಾರಿ : ಮೇಲಾಧಿಕಾರಿಗಳು ಗಮನಹರಿಸುವಂತೆ ಸಾರ್ವಜನಿಕರಿಂದ ಆಗ್ರಹ

April 8, 2024
in ಬಂಟ್ವಾಳ
0
ಸಾಲೆತ್ತೂರು ಕೂಡುರಸ್ತೆ ಚೆಕ್ ಪೋಸ್ಟ್ ಅಕ್ರಮ ವ್ಯವಹಾರಿಗಳಿಗೆ ರಹದಾರಿ : ಮೇಲಾಧಿಕಾರಿಗಳು ಗಮನಹರಿಸುವಂತೆ ಸಾರ್ವಜನಿಕರಿಂದ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಕರ್ನಾಟಕ ಕೇರಳ ಗಡಿಪ್ರದೇಶವಾದ ಕೂಡುರಸ್ತೆಯಲ್ಲಿ ಆರಂಭಿಸಲಾಗಿರುವ ಚೆಕ್ ಪೋಸ್ಟ್ ಮಾತ್ರ ಇವೆಲ್ಲವಕ್ಕೆ ವ್ಯತಿರಿಕ್ತವಾಗಿದ್ದು, ಅಲ್ಲಿನ ಸಿಬ್ಬಂದಿಗಳ ಅಲಸ್ಯತನದಿಂದಾಗಿ ಈ ಚೆಕ್ ಪೋಸ್ಟ್ ಮಾತ್ರ ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾಗಿದೆ ಎನ್ನುವ ಆರೋಪ ನಾಗರಿಕ ವಲಯದಿಂದ ಕೇಳಿಬರುತ್ತಿದೆ.

Advertisement
Advertisement

ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಕೂಡಲೇ ಜೆಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳ‌ನ್ನು ತೆರೆಯಲಾಗಿತ್ತು. ಅದೇ ರೀತಿ ಸಾಲೆತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಡುರಸ್ತೆಯಲ್ಲಿಯೂ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಅಲ್ಲಿ ಪೊಲೀಸರ ಸಹಿತ ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳನ್ನು ನಿಯೋಜನೆ‌ ಮಾಡಲಾಗಿದ್ದು, ಮೂರು ಪಾಳಿಯಲ್ಲಿ ಅವರು ಕೆಲಸ ನಿರ್ವಹಿಸುತ್ತಿದ್ದಾರೆ. ಈ ಚೆಕ್ ಪೋಸ್ಟ್ ಮೂಲಕ ರಾಜ್ಯದ ಒಳಬರುವ ಹಾಗೂ ಹೊರಹೋಗುವ ವಾಹನಗಳ ಬಗ್ಗೆ ನಿಘಾ ವಹಿಸುವಂತೆ ಚೆಕ್ ಪೋಸ್ಟ್ ಸಿಬ್ಬಂದಿಗಳಿಗೆ ಮೇಲಾಧಿಕಾರಿಗಳು ನಿರ್ದೇಶನ ನೀಡಿದ್ದು, ಈ ನಿಟ್ಟಿನಲ್ಲಿ ಚೆಕ್ ಪೋಸ್ಟ್ ಗಳು ಕಾರ್ಯ ನಿರ್ವಹಿಸ ಬೇಕಿದೆ. ಆದರೆ ಕೂಡುರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚೆಕ್ ಪೋಸ್ಟ್ ನಲ್ಲಿ ಮಾತ್ರ ಅಲ್ಲಿ‌ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಆ ದಾರಿಯಾಗಿ ಹಲವಾರು ವಾಹನಗಳು ರಾತ್ರಿ ಹಗಲೆನ್ನದೆ ತೆರಳುತ್ತಿವೆಯಾದರೂ ಬೆರಳೆಣಿಕೆಯ ವಾಹನವನ್ನು ತಪಾಸಣೆ ನೆಪದಲ್ಲಿ ನಿಲ್ಲಿಸಿ ಉಳಿದ ವಾಹನಗಳನ್ನು ಹಾಗೇ ಬಿಡುತ್ತಿದ್ದು, ಈ ಚೆಕ್ ಪೋಸ್ಟ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎನ್ನುವ ಆರೋಪ ನಾಗರೀಕ ವಲಯದಿಂದ ಕೇಳಿಬರುತ್ತಿದೆ.

Advertisement

ಅಕ್ರಮವನ್ನು ತಡೆಗಟ್ಟಿದ್ದ ಚೆಕ್ ಪೋಸ್ಟ್

ಗಡಿ ಭಾಗದಲ್ಲಿ ನಡೆಯುವ ಅಪರಾಧ ಕೃತ್ಯವನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಅಪರಾಧ ಕೃತ್ಯ ನಡೆಸಿ ಅಪರಾಧಿಗಳು ಪರಾರಿಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ನಿರ್ದೇಶನದಂತೆ ಸಾಲೆತ್ತೂರು ಬಳಿಯ ಕೂಡುರಸ್ತೆಯಲ್ಲಿ ಚಕ್ ಪೋಸ್ಟ್ ಅನ್ನು ಆರಂಭಿಸಲಾಗಿತ್ತು. ಇಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳು ರಾತ್ರಿ ಹಗಲೆನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರಿಂದಾಗಿ ಈ ಭಾಗದಲ್ಲಿ ನಡೆಯುತ್ತಿದ್ದ ಅಪರಾಧ ಕೃತ್ಯಗಳಿಗೆ ಕಡಿವಾಣ ಬಿದ್ದಿತ್ತು ಮಾತ್ರವಲ್ಲದೆ ಜನರಲ್ಲಿ ಪೊಲೀಸರ ಮೇಲಿನ ಭಯ ಹೆಚ್ಚಾಗಿತ್ತು.

ಘನತೆ ಕಳೆದುಕೊಳ್ಳುತ್ತಿದೆ ಕೂಡುರಸ್ತೆ ಚೆಕ್ ಪೋಸ್ಟ್

ಇದೀಗ ಚುನಾವಣೆ ನೀತಿಸಂಹಿತೆ ಜಾರಿಯಾದ ಬಳಿಕ ಕೂಡುರಸ್ತೆ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಭದ್ರತೆ ಹಿತದೃಷ್ಠಿಯಿಂದ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಆದರೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವೊಂದು ಚುನಾವಣಾ ಕರ್ತವ್ಯದ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಮರೆತು ಕೆಲವೊಂದು ಬೆರಳೆಣಿಕೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿ ಉಳಿದವುಗಳನ್ನು ಹಾಗೆಯೇ ಬಿಡುತ್ತಿರುವುದರಿಂದ ಜನರಿಗೆ ಚೆಕ್ ಪೋಸ್ಟ್ ಬಗೆಗಿನ ಭಯ ದೂರವಾಗಿದ್ದು, ಅಕ್ರಮ ವ್ಯವಹಾರಕ್ಕೆ ಇದೊಂದು ರಹದಾರಿಯಾದಂತಾಗಿದೆ ಎನ್ನುವುದು ನಾಗರೀಕರ ಆರೋಪವಾಗಿದೆ.

ಮೇಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ

ಚುನಾವಣೆ ನಿಮಿತ್ತ ಆರಂಭಿಸಲಾದ ಚೆಕ್ ಪೋಸ್ಟ್ ಗಳು ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕಿದೆ. ನೂರಾರು ವಾಹನಗಳು ಸಂಚಾರ ನಡೆಸುವ ರಸ್ತೆಯಲ್ಲಿ
ಮೇಲಾಧಿಕಾರಿಗಳ ಕಣ್ಣಿಗೆ ಮಣ್ಣೆರಚುವ ಸಲುವಾಗಿ ಕೆಲವೊಂದು ವಾಹನಗಳನ್ನು ತಪಾಸಣೆ ನೆಪದಲ್ಲಿ ನಿಲ್ಲಿಸುತ್ತಿರುವುದರಿಂದ ಚೆಕ್ ಪೋಸ್ಟ್ ಆರಂಭಿಸಿರುವ ಉದ್ದೇಶ ಈಡೇರಲು ಸಾಧ್ಯವಿಲ್ಲ. ಇಂತಹ ಸಿಬ್ಬಂದಿಗಳು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಚೆಕ್ ಪೋಸ್ಟ್ ನ ಘನತೆಗೂ ಕುಂದು ಬರುವ ಸಾದಸ್ಯತೆ ಇದೆ. ಮೇಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸುವುದು ಅನಿವಾರ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Previous Post

ಬಂಟ್ವಾಳ : ಚಲಿಸುತ್ತಿದ್ದ ವೇಳೆ ಕಾಣಿಸಿಕೊಂಡ ಬೆಂಕಿ : ರಸ್ತೆ ಮಧ್ಯೆ ಹೊತ್ತಿ ಉರಿದ ಡಸ್ಟರ್ ಕಾರು..!

Next Post

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಟೆನ್ಷನ್‌! ಫಲಿತಾಂಶ ಹೊರ ಬೀಳುವುದಕ್ಕೆ ಮುಂಚೆಯೇ ಹೈಕೋರ್ಟ್ ಆದೇಶಕ್ಕೆ ತಡೆ

OtherNews

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026

Leave a Reply Cancel reply

Your email address will not be published. Required fields are marked *

Recent News

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.