ವಿಟ್ಲ : ಬಾವಿಗೆ ರಿಂಗ್ ಹಾಕಲು ಬಾವಿಯೊಳಗೆ ಇಳಿದಿದ್ದ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಕೇಪು ಗ್ರಾಮದ ಪಡಿಬಾಗಿಲು ವಿದ್ಯಾಗಿರಿ ಶಾಲಾ ಸಮೀಪ ನಡೆದಿದೆ.
ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಮೃತ ಕಾರ್ಮಿಕರು.
ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಕಾರ್ಮಿಕ ಆಕ್ಸಿಜನ್ ಕೊರತೆಯಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದಿರುವ ಹಿನ್ನೆಲೆ ಇನ್ನೊಬ್ಬ ಇಳಿದಿದ್ದು, ಈ ವೇಳೆ ಆತನೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾನೆ. ಮೃತದೇಹವನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.