Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ದ.ಕ. ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ : ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

April 24, 2024
in ಮಂಗಳೂರು, ರಾಜಕೀಯ, ರಾಜ್ಯ
0
ದ.ಕ. ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನೀಲನಕ್ಷೆ : ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದರು.

Advertisement
Advertisement

Advertisement

ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸುವುದು ಮತ್ತು ಇದರ ಜೊತೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಶಿರಾಡಿ ಘಾಟ್ ನಲ್ಲಿ ಆಧುನಿಕ ಮಾದರಿಯಲ್ಲಿ ಸರ್ವಋತು ರಸ್ತೆಯಾಗಿಸುವುದು ಮತ್ತು ಮಂಗಳೂರು- ಬೆಂಗಳೂರು ಮಧ್ಯೆ ಪ್ರತ್ಯೇಕ ರೈಲ್ವೇ ಹಳಿ ನಿರ್ಮಿಸುವ ಗುರಿಯಿದೆ. ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯಾದಲ್ಲಿ ಮಂಗಳೂರು ಅಭಿವೃದ್ಧಿಗೆ ವೇಗ ಸಿಗಲಿದೆ. ಮಂಗಳೂರಿನ ಬಂದರಿನ ಮೂಲಕ ಬೆಂಗಳೂರಿಗೆ ಕನೆಕ್ಟ್ ಆಗಲು ಅವಕಾಶ ಸಿಗಲಿದೆ ಎಂದರು.

ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ

ಪ್ರಮುಖವಾಗಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೈಗಾರಿಕೆಗಳ ಸ್ಥಾಪನೆ ಆಗಬೇಕಾಗಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ಉತ್ತೇಜನ ನೀಡಿ, ಆಹಾರ ಸಂಸ್ಕರಣೆ, ಜವಳಿ, ಮೀನುಗಾರಿಕೆ, ಸಮುದ್ರ ಅವಲಂಬಿತ ಉತ್ಪನ್ನಗಳ ವಿಶೇಷ ಕ್ಲಸ್ಟರ್ ಸ್ಥಾಪನೆ, ಮಹಿಳೆಯರು ಮತ್ತು ಮೀನುಗಾರ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಇಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಪಡೆದವರಿಗೆ ಅವಕಾಶ ಒದಗಿಸುವುದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಗಳನ್ನು ಸ್ಥಾಪಿಸಲು ಜಾಗತಿಕ ಕಂಪನಿಗಳಿಗೆ ಆಹ್ವಾನ ನೀಡಲಾಗುವುದು.

ಸ್ಟಾರ್ಟಪ್ ಮತ್ತು ಉದ್ಯಮಶೀಲತೆಗೆ ಒತ್ತು

ಜಿಲ್ಲೆಯಲ್ಲಿ ಉದಯೋನ್ಮುಖ ಉದ್ಯಮಿಗಳಿಗೆ ಬೆಂಬಲ ನೀಡುವ ಸಲುವಾಗಿ ಹೊಸ ಸ್ಟಾರ್ಟಪ್ ಗಳಿಗೆ ಅವಕಾಶ ನೀಡಲಾಗುವುದು. ಕಳೆದ ಕೆಲವು ದಶಕಗಳಲ್ಲಿ ವಿವಿಧ ಕಡೆ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ದಕ್ಷಿಣ ಕನ್ನಡ ಮೂಲದ ಉದ್ಯಮಿಗಳನ್ನು ಮರಳಿ ಊರಿಗೆ ಕರೆತಂದು ಉದ್ಯಮ ಸ್ಥಾಪಿಸಲು ಪ್ರೇರಣೆ ನೀಡುವುದು, ಉದ್ಯಮಶೀಲರಾಗಲು ಉತ್ಸುಕರಾಗಿರುವ ಯುವ ಮನಸ್ಸುಗಳಿಗೆ ಪ್ರೋತ್ಸಾಹ ನೀಡಲು Be Your Own Boss ಎಂಬ ಪರಿಕಲ್ಪನೆ ಇದೆ. ಗೇಮಿಂಗ್, ಅನಿಮೇಶನ್, ಡಿಸೈನಿಂಗ್ ಇತ್ಯಾದಿ ಸೃಜನಶೀಲ ಮತ್ತು ಸಿನಿಮಾ ಕ್ಷೇತ್ರದ ಉತ್ತೇಜನಕ್ಕಾಗಿ ಫಿಲ್ಮ್ ಸಿಟಿ ನಿರ್ಮಾಣದ ಗುರಿಯಿದೆ.

ಜಗತ್ತಿನ ಐದು ವಿಶಿಷ್ಟ ಬೀಚ್ಗಗಳಲ್ಲಿ ಸಸಿಹಿತ್ಲು

ಪ್ರವಾಸೋದ್ಯಮ ಉತ್ತೇಜನ ದೃಷ್ಟಿಯಿಂದ ಸಾಹಸ ಕ್ರೀಡೆಗಳಿಗೆ ಪೂರಕ ವಾತಾವರಣ ಕಲ್ಪಿಸಲಾಗುವುದು. ಮಂಗಳೂರಿನ ಸಸಿಹಿತ್ಲು ಬೀಚ್ ಜಗತ್ತಿನಲ್ಲೇ ಸಾಹಸ ಕ್ರೀಡೆಗಳಿಗೆ ಪೂರಕ ಆಗಬಲ್ಲ ಜಗತ್ತಿನ ಐದು ಬೀಚ್ ಗಳಲ್ಲಿ ಒಂದಾಗಿದ್ದು, ಆ ಪರಿಸರವನ್ನು ಸರಕಾರದ ವ್ಯವಸ್ಥೆಯಡಿ ಅಭಿವೃದ್ಧಿ ಪಡಿಸಲಾಗುವುದು. ಇದರೊಂದಿಗೆ ದೇಗುಲ, ಜಾನಪದ, ಆಹಾರ, ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.

ತುಳುನಾಡು ಹೆರಿಟೇಜ್ ಸೆಂಟರ್ ಸ್ಥಾಪನೆ

ನಮ್ಮ ಜಿಲ್ಲೆಯ ಮಹಿಳೆಯರು ಆತಿಥ್ಯ, ಜವಳಿ, ಆಹಾರ, ಪ್ರವಾಸ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ್ದಾರೆ. ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಗೆ ಉತ್ತೇಜನ ನೀಡಲಾಗುವುದು. ನಮ್ಮ ಜಿಲ್ಲೆಯ ವಿಶೇಷ ಕಲೆ, ಸಂಸ್ಕೃತಿಯನ್ನು ವಿಶ್ವ ಮಟ್ಟಕ್ಕೆ ಪರಿಚಯಿಸಲು ತುಳುನಾಡು ಹೆರಿಟೇಜ್ ಸೆಂಟರ್ ಸ್ಥಾಪನೆ, ತುಳು ಭಾಷೆಗೆ ಸ್ಥಾನ ಕೊಡಿಸುವಲ್ಲಿ ಪ್ರಯತ್ನ, ದೇಯಿ ಬೈದೆತಿ ಹೆಸರಲ್ಲಿ ಸಾಂಪ್ರದಾಯಿಕ ಔಷಧಿ ಕೇಂದ್ರ ಸ್ಥಾಪನೆಗೆ ಒತ್ತು ನೀಡಲಾಗುವುದು.

ಉನ್ನತ ಶಿಕ್ಷಣದ ಹಬ್ ಸ್ಥಾಪನೆ

ಜಿಲ್ಲೆಯ ಜೀವನಾಡಿಯಾಗಿರುವ ಕೃಷಿ, ಹೈನುಗಾರಿಕೆ, ಮೀನುಗಾರಿಕೆಯಲ್ಲಿ ಸಮಗ್ರ ಅಭಿವೃದ್ಧಿ, ಸಮಸ್ಯೆ ಆಲಿಸುವ ಯತ್ನ, ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿ ಉನ್ನತೀಕರಿಸಲು ಪ್ರಯತ್ನ, ಮತ್ಸ್ಯೋದ್ಯಮದ ಪ್ರಗತಿ ಮೂಲಕ ನೀಲಿ ಕ್ರಾಂತಿಗೆ ಕೊಡುಗೆ ನೀಡಲು ಪ್ರೋತ್ಸಾಹ ನೀಡಲಾಗುವುದು. ನಮ್ಮ ಯುವಶಕ್ತಿ ಅತ್ಯಮೂಲ್ಯವಾಗಿದ್ದು, ಐಐಟಿಯಂತಹ ಉನ್ನತ ಶಿಕ್ಷಣಕ್ಕಾಗಿ ದೆಹಲಿ, ಮುಂಬೈ ಹೋಗುವುದನ್ನು ತಡೆಯಲು ಐಐಎಂ- ಐಐಟಿ ಸ್ಥಾಪನೆಗೆ ಪ್ರಯತ್ನ, ಕ್ರೀಡಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಗೆ ಪೂರಕವಾಗಿ ಕ್ರೀಡಾ ಮೂಲಸೌಕರ್ಯ ಮತ್ತು ವಿಶೇಷ ತರಬೇತಿಗೆ ಆದ್ಯತೆ, ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆ, ವಿವಿಧ ಕ್ಷೇತ್ರಗಳ ಜನರೊಂದಿಗೆ ಸವಾಲು, ಸಮಸ್ಯೆ ಅರಿಯಲು ನಿರಂತರ ಮುಕ್ತ ಸಂವಾದಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು.

ಕರಾವಳಿ ಭದ್ರತೆಗೆ ವಿಶೇಷ ಆದ್ಯತೆ

ಕರಾವಳಿಯಲ್ಲಿ ಪಿಎಫ್ಐನಂತಹ ದೇಶ ವಿರೋಧಿ ಸಂಘಟನೆಗಳ ನೆಲೆಗಳಿದ್ದು ಅವನ್ನು ಮೂಲೋತ್ಪಾಟನೆ ಮಾಡಲು ಸೇನೆಯಲ್ಲಿದ್ದ ಅನುಭವ ಆಧರಿಸಿ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗುವುದು, ಇಂಡಿಯನ್ ಕೋಸ್ಟ್ ಗಾರ್ಡ್ ಅಕಾಡೆಮಿ ಈಗಾಗಲೇ ಕೆಂಜಾರಿಗೆ ಬಂದಿದ್ದು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರುವುದು, ಭಯೋತ್ಪಾದನೆ ಚಟುವಟಿಕೆ ನಿಗ್ರಹಿಸಲು ಎನ್ಐಎ ಮತ್ತು ವಿಧಿವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡುವ ಭರವಸೆಯನ್ನು ಬ್ರಿಜೇಶ್ ಚೌಟ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಚುನಾವಣಾ ಪ್ರಭಾರಿ ಗಣೇಶ್ ಕಾರ್ಣಿಕ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Previous Post

ಲೋಕಸಭಾ ಚುನಾವಣೆ : ದ.ಕ. ಜಿಲ್ಲೆ ಚುನಾವಣೆಗೆ ಸಂಪೂರ್ಣ ಸಜ್ಜು : 1,876 ಮತಗಟ್ಟೆಗಳು, 18,18,127 ಮತದಾರರು, 72 ಮಾದರಿ ಮತಗಟ್ಟೆಗಳು

Next Post

ಮಲಗಲು ಬಂದು ಕೊಂದೇ ಬಿಟ್ಟ ; ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ..!

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.