ಪುತ್ತೂರು : ಬೆಟ್ಟಂಪಾಡಿ ಗ್ರಾಮದ ಬರೆ ಎಂಬಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ರೀತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಯುವಕನನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಂಪ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಟ್ಟಂಪಾಡಿ ಬರೆ ದಿ.ಕೊರಗಪ್ಪ ಶೆಟ್ಟಿಯವರ ಪುತ್ರ ಚೇತನ್ (33) ಮೃತ ಯುವಕ.
ಮದ್ಯ ವ್ಯಸನಿಯಾಗಿದ್ದ ಚೇತನ್ ಮೇ.9ರಂದು ರಾತ್ರಿ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದ., ನಂತರ ನೆರೆಯ ಮನೆಗೆ ಹೋಗಿ ಅಲ್ಲಿಯೂ ಗಲಾಟೆ ಮಾಡಿದ್ದ., ಅಲ್ಲಿಂದ ಚೇತನ್ ರನ್ನು ಆತನ ತಾಯಿ, ಬಾವ ಹಾಗೂ ನೆರೆಯ ಮನೆಯ ವ್ಯಕ್ತಿ ಸೇರಿಕೊಂಡು ನಾಯಿಯ ಸಂಕೋಲೆಯಿಂದ ಕಟ್ಟಿ ಎಳೆದುಕೊಂಡು ಬಂದಿದ್ದರು ಎನ್ನಲಾಗುತ್ತಿದೆ.
ಯುವಕನ ಸಾವಿನ ಮೇಲೆ ಅನುಮಾನಗಳು ಕಂಡು ಬಂದಿದ್ದು, ಮೃತದೇಹವನ್ನು ಮಂಗಳೂರು ದೇರಳಕಟ್ಟೆಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕೊಂಡೊಯ್ಯಲಿದ್ದಾರೆ ಎಂದು ವರದಿಯಾಗಿದೆ.
ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಘಟನಾ ಸ್ಥಳ ಹಾಗೂ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.