Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.10/11) : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ : ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…!

    (ಜ.10/11) : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ : ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…!

    ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

    ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

    ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!

    ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!

    ಮೆಲ್ಕಾರ್ ಡಿವೈಡರ್‌ಗೆ ಕಾರು ಡಿಕ್ಕಿ: ಪುತ್ತೂರಿನ ನಾಲ್ವರಿಗೆ ಗಾಯ : ಆಸ್ಪತ್ರೆಗೆ ದಾಖಲಿಸಿದ ಕೃಷ್ಣ ಪ್ರಸಾದ್ ಆಳ್ವ..!!

    ಮೆಲ್ಕಾರ್ ಡಿವೈಡರ್‌ಗೆ ಕಾರು ಡಿಕ್ಕಿ: ಪುತ್ತೂರಿನ ನಾಲ್ವರಿಗೆ ಗಾಯ : ಆಸ್ಪತ್ರೆಗೆ ದಾಖಲಿಸಿದ ಕೃಷ್ಣ ಪ್ರಸಾದ್ ಆಳ್ವ..!!

    ಪುತ್ತೂರು: ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ…!

    ಪುತ್ತೂರು: ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ…!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.10/11) : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ : ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…!

    (ಜ.10/11) : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ : ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…!

    ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

    ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

    ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!

    ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!

    ಮೆಲ್ಕಾರ್ ಡಿವೈಡರ್‌ಗೆ ಕಾರು ಡಿಕ್ಕಿ: ಪುತ್ತೂರಿನ ನಾಲ್ವರಿಗೆ ಗಾಯ : ಆಸ್ಪತ್ರೆಗೆ ದಾಖಲಿಸಿದ ಕೃಷ್ಣ ಪ್ರಸಾದ್ ಆಳ್ವ..!!

    ಮೆಲ್ಕಾರ್ ಡಿವೈಡರ್‌ಗೆ ಕಾರು ಡಿಕ್ಕಿ: ಪುತ್ತೂರಿನ ನಾಲ್ವರಿಗೆ ಗಾಯ : ಆಸ್ಪತ್ರೆಗೆ ದಾಖಲಿಸಿದ ಕೃಷ್ಣ ಪ್ರಸಾದ್ ಆಳ್ವ..!!

    ಪುತ್ತೂರು: ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ…!

    ಪುತ್ತೂರು: ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ…!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಚಾಲಕರ – ನಿರ್ವಾಹಕರ ಮಾಹಿತಿ ಕಾರ್ಯಗಾರ-2024 : ಸಂಚಾರಿ ಉಲ್ಲಂಘನೆ ನ್ಯಾಯ ಸಂಹಿತೆಯಲ್ಲಿ ಬದಲಾವಣೆ ; ಇನ್ಮುಂದೆ ಶಿಕ್ಷೆಯ ಪ್ರಮಾಣ ಹೆಚ್ಚಾಗಲಿದೆ – ಡಿಸಿಪಿ ಬಿ.ಪಿ. ದಿನೇಶ್ ಕುಮಾರ್

May 28, 2024
in ಮಂಗಳೂರು
0
ಚಾಲಕರ – ನಿರ್ವಾಹಕರ ಮಾಹಿತಿ ಕಾರ್ಯಗಾರ-2024 : ಸಂಚಾರಿ ಉಲ್ಲಂಘನೆ ನ್ಯಾಯ ಸಂಹಿತೆಯಲ್ಲಿ ಬದಲಾವಣೆ ; ಇನ್ಮುಂದೆ ಶಿಕ್ಷೆಯ ಪ್ರಮಾಣ ಹೆಚ್ಚಾಗಲಿದೆ – ಡಿಸಿಪಿ ಬಿ.ಪಿ. ದಿನೇಶ್ ಕುಮಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಬಸ್ಸೆಂದರೆ ವಾಹನಗಳಲ್ಲಿ ದೊಡ್ಡಣ್ಣ, ಹಾಗಾಗಿ ಸಣ್ಣ ವಾಹನಗಳಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸಿರಿ. ನ್ಯಾಯಸಂಹಿತೆಯಲ್ಲಿ ಮುಂದಿನ ತಿಂಗಳಿನಿಂದ ಬದಲಾವಣೆಗಳು ಆಗಲಿದೆ. ಸಂಚಾರ ನಿಯಮ ಉಲ್ಲಂಘನೆಗಳ ಶಿಕ್ಷೆಯ ಪ್ರಮಾಣ ಮತ್ತು ದಂಡದ ಪ್ರಮಾಣ ಹೆಚ್ಚಾಗಲಿದೆ ಎಂದು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಪಿ. ದಿನೇಶ್ ಕುಮಾರ್
ಹೇಳಿದರು.

Advertisement
Advertisement
Advertisement

Advertisement
Advertisement

ದ.ಕ ಬಸ್ ಮಾಲಕರ ಸಂಘ, ಕೆನರಾ ಬಸ್ಸು ಮಾಲಕರ ಸಂಘ ಹಾಗೂ ಸೈಂಟ್ ಅಲೋಶಿಯಸ್ ಕಾಲೇಜು(ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸಂಯುಕ್ತ ಆಶ್ರಯದಲ್ಲಿ ಬಸ್ಸು ಚಾಲಕರ – ನಿರ್ವಾಹಕರ ಮಾಹಿತಿ ಕಾರ್ಯಗಾರ 2024ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಥಾಯಸ್ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಮಂಗಳೂರು ನಗರದ ರಸ್ತೆಯನ್ನು ಅಪಘಾತ ರಹಿತ ರಸ್ತೆ ಮಾಡಲು ಇಲಾಖೆ ಪಣ ತೊಟ್ಟಿದೆ. ಅದರ ಭಾಗವಾಗಿ ಕಾರ್ಯಗಾರ ನಡೆಸಲು ಸೂಚಿಸಲಾಗಿದೆ. 80 ವರ್ಷಗಳ ಇತಿಹಾಸದ ಖಾಸಗಿ ಬಸ್ಸಿನ ವ್ಯವಸ್ಥೆ ಮಂಗಳೂರಿನಲ್ಲಿದೆ. ರಸ್ತೆಗಳು ಹಾಗೇ ಇದ್ದರೂ ವಾಹನಗಳ ಸಂಖ್ಯೆ ದುಪ್ಪಟ್ಟಾಗಿವೆ. ಬಸ್ ಚಾಲಕರು ನಿಯಮಗಳ ಪಾಲನೆ ಮಾಡುವಲ್ಲಿ ಹಿಂದೇಟು ಹಾಕುವುದರಿಂದ ಕಾರ್ಯಗಾರಗಳು ಅನಿವಾರ್ಯವಾಗಿದೆ. ಪೊಲೀಸರು ದಂಡ ವಿಧಿಸಿದರೂ ನಿಯಮ ಉಲ್ಲಂಘನೆಗಳು ನಿಂತಿಲ್ಲ. ತಾಳ್ಮೆ ಅನ್ನುವುದು ಚಾಲಕರಲ್ಲಿ ಇಲ್ಲದಂತಾಗಿದೆ. ನಗರ ಸುರಕ್ಷಿತವಾಗಿದೆ ಅನ್ನುವ ಮನೋಭಾವ ಜನರಲ್ಲಿ ಮೂಡುವಂತಾಗಲು ಕಾರ್ಯಾಗಾರದಲ್ಲಿ ಸಿಗುವ ಮಾಹಿತಿಯನ್ನು ಕರ್ತವ್ಯದಲ್ಲಿ ಅಳವಡಿಸಿಕೊಳ್ಳಿರಿ. ನ್ಯಾಯ ಸಂಹಿತೆಯಲ್ಲಿ ಬದಲಾವಣೆಗಳಾಗಿದ್ದು, ಐಪಿಸಿ ಬದಲಾಗಿ ಬಿಎನ್ ಎಸ್ ನ್ಯಾಯಸಂಹಿತೆ ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದ್ದು, ಶಿಕ್ಷೆಯ ಪ್ರಮಾಣ ಹೆಚ್ಚಾಗಲಿದೆ.

ನಿರ್ಲಕ್ಷ್ಯತನದ ಚಾಲನೆ ಐಪಿಸಿ 279 ಬದಲಾಗಿ ಬಿಎನ್ ಎಸ್ ಕಾಯಿದೆಯಡಿ 281, 6 ತಿಂಗಳ ಕಾರಾಗೃಹದಿಂದ 5,000 ದಂಡ, 3 ವರ್ಷ ಕಾರಾಗೃಹದಿಂದ 10,000 ದಂಡಕ್ಕೆ ಏರಿಕೆ, ಸಾಮಾನ್ಯ ಗಾಯ 337 ಐಪಿಸಿ ಬದಲಾಗಿ ಬಿಎನ್ ಎಸ್ 125 A, 125B, ಮರಣ ಸಂಭವಿಸಿದಾಗ 304 A ಬದಲು 106 BNS,ಎರಡು ವರ್ಷಗಳಿದ್ದ ಶಿಕ್ಷೆಯ ಪ್ರಮಾಣ 5 ವರ್ಷಕ್ಕೆ ಏರಿಕೆ, ಅಪಘಾತದ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸದೇ ಇದ್ದಲ್ಲಿ 134, 134A, 134B, ಅಪಘಾತದ ಮಾಹಿತಿ ಪೊಲೀಸ್ ಠಾಣೆಗೆ‌ ನೀಡದೇ ಇರುವುದು, ಹಿಟ್ ಆಂಡ್ ರನ್ ಪ್ರಕರಣಗಳಿಗೆ 106(2) ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಲಿದೆ.

ರೇಸಿಂಗ್, ಮದ್ಯಸೇವಿಸಿ ಚಾಲನೆ, ಮೊಬೈಲ್ ಫೋನ್ ಬಳಕೆ, ಓವರ್ ಟೇಕ್, ರೆಡ್ ಲೈಟ್ ಉಲ್ಲಂಘನೆ, ಒನ್ ವೆ ಚಾಲನೆ, ರೇಸಿಂಗ್ ಪ್ರಕರಣಗಳಲ್ಲಿ ಚಾಲಕನ ಚಾಲನ ಪರವಾನಗಿ ರದ್ದುಪಡಿಸುವ ಕ್ರಮ ಕೈಗೊಳ್ಳಲಾಗುವುದು. ಮುಂದೆ ಎಲ್ಲಾ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಕೆ ಆಗುವುದರಿಂದ ಹೆಲ್ಮೆಟ್, ಮೊಬೈಲ್ ಬಳಕೆ, ಸೀಟ್ ಬೆಲ್ಟ್ ಹಾಕದಿರುವುದನ್ನೂ ಪತ್ತೆಹಚ್ಚಲಾಗುವುದು. ಬಸ್ಸುಗಳ ನಿರ್ವಾಹಕರು ಟಿಕೇಟು ನೀಡದೆ ನಿಮ್ಮ ಮೇಲಿನ ವಿಶ್ವಾಸ ಕಳೆದುಕೊಳ್ಳಬೇಡಿ. ಕರ್ಕಷ ಹಾರ್ನ್ ಗಳ ಕುರಿತು ಜಾಗೃತಿ ವಹಿಸಿದ್ದರೂ, ಮುಂಬೈ, ಬೆಂಗಳೂರು ದೂರದೂರಿಗೆ ತೆರಳುವ ಬಸ್ಸುಗಳ ಹಾರ್ನ್ ಕುರಿತು ವ್ಯಾಪಕ ದೂರುಗಳು ಬರುತ್ತಿವೆ. ಸ್ವಶಿಸ್ತು ಕಾಪಾಡುವ ಮೂಲಕ ಸಾರ್ವಜನಿಕರ ಜವಾಬ್ದಾರಿಯನ್ನು ನಿರ್ವಹಿಸಿ ಬಸ್ ನಿಲ್ದಾಣಕ್ಕೇ ಬಸ್ಸುಗಳ ಕೊಂಡೊಯ್ಯಿರಿ. ಮೀಸಲು ಸೀಟುಗಳಲ್ಲಿ ಅವರಿಗೇ ಅವಕಾಶ ಕಲ್ಪಿಸಿರಿ. ಸಂಘ ಹೊರಡಿಸಿರುವ ಭಿತ್ತಿಪತ್ರದಲ್ಲಿ ಅವಶ್ಯಕ ಮಾಹಿತಿಗಳಿದ್ದು, ಎಲ್ಲರೂ ಪಾಲಿಸಿರಿ ಎಂದರು.

ಸೈಂಟ್ ಅಲೋಶಿಯಸ್ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಆಲ್ವಿನ್ ಡೇಸಾ, ಸಹಾಯಕ ಪೊಲೀಸ್ ಆಯುಕ್ತ ನಜ್ಞಾ ಫಾರೂಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ನಾಡ್, ಉಪನ್ಯಾಸಕ, ರಾಷ್ಟ್ರಮಟ್ಟದ ತರಬೇತುದಾರ ರಾಜೇಂದ್ರ ಭಟ್, ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜೀವಂದರ್ ಅಧಿಕಾರಿ ಉಪಸ್ಥಿತರಿದ್ದರು. ಅಧ್ಯಕ್ಷ ಅಝೀಝ್ ಪರ್ತಿಪಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ರಾಮಚಂದ್ರ ಪಿಲಾರ್ ವಂದಿಸಿದರು. ಆರ್.ಜೆ ಅಭಿಷೇಕ್ ಶೆಟ್ಟಿ ನಿರೂಪಿಸಿದರು.

ಕೊಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು. ಸಂಚಾರಿ ಠಾಣೆಯ ಠಾಣಾಧಿಕಾರಿಗಳಾದ ಆನಂದ್, ಉರಗಪ್ಪ, ದೀಪಕ್, ಕೃಷ್ಣಾನಂದ ನಾಯಕ್ ಭಾಗವಹಿಸಿದ್ದರು.

ನಗರದ ಖಾಸಗಿ ಬಸ್ಸುಗಳಲ್ಲಿ ಟೈಮಿಂಗ್ ವಿಚಾರದ ಕುರಿತು ಪರಿಷ್ಕರಣೆ ಅಗತ್ಯ ಆಗಬೇಕಿದೆ. ಸಂಘ ಈ ಕುರಿತು ಹೆಚ್ಚಿನ ಒಲವು ತೋರಿಸಬೇಕಿದೆ. ಮಂಗಳೂರು ನಗರದಲ್ಲಿ 386 ಸಿಟಿ ಹಾಗೂ 566 ಸರ್ವಿಸ್ ಬಸ್ಸುಗಳು ಸಂಚರಿಸುತ್ತಿವೆ. ಈ ಪೈಕಿ ಇತ್ತೀಚೆಗೆ 236 ಕರ್ಕಷ ಹಾರನ್ ತೆಗೆದು ಪ್ರಕರಣ ದಾಖಲಿಸಲಾಗಿದೆ. ಆದರೂ ದೂರುಗಳು ನಿರಂತರವಾಗಿ ಬರುತ್ತಲೇ ಇದೆ. ಕಂಪ್ಯೂಟರೈಸ್ಡ್ ಟಿಕೇಟ್ ಯಂತ್ರವನ್ನು ಕಡ್ಡಾಯವಾಗಿ ಬಳಸಿ, ಕಡ್ಡಾಯ ಟಿಕೇಟನ್ನು ಪ್ರಯಾಣಿಕರಿಗೆ ನೀಡಿ. ಪ್ರಯಾಣಿಕರೊಂದಿಗೆ ಸಭ್ಯತೆಯಿಂದ ವರ್ತಿಸಿರಿ, ಮಹಿಳಾ ಪ್ರಯಾಣಿಕರನ್ನು ಬಸ್ಸೊಳಗಡೆ ಹತ್ತಿಸುವಾಗ ತಾಳ್ಮೆಯಿಂದ ವರ್ತಿಸಿರಿ, ಡೊರ್ ಗಳನ್ನು ಕಡ್ಡಾಯವಾಗಿ ಹಾಕಬೇಕು. – ಸಹಾಯಕ ಪೊಲೀಸ್ ಆಯುಕ್ತ ನಜ್ಞಾ ಫಾರೂಕಿ

ಟೈಮಿಂಗ್ ಸ್ಪರ್ಧೆಯಿಂದ ಚಾಲಕರಲ್ಲಿ ಒತ್ತಡಗಳು ಹೆಚ್ಚಾಗಿ 40ರ ವಯಸ್ಸಿನಲ್ಲಿ ಬಿಪಿ, ಶುಗರ್ ನಿಂದ ಬಳಲಿ ಆರೋಗ್ಯ ಕಳೆದುಕೊಳ್ಳುವಂತಾಗಿದೆ. ಬಸ್ಸೊಳಗಡೆ ದೇವರ ಫೋಟೊಗಳ ಬದಲು ಚಾಲಕರ ಕುಟುಂಬದ ಫೋಟೊಗಳಿರಿಸಿದರೆ ವೇಗ ತನ್ನಷ್ಟಕ್ಕೆ ಕಡಿಮೆಯಾಗುವುದು. ಬಸ್ಸಲ್ಲಿ ಸ್ಕ್ಯಾನರ್ ವ್ಯವಸ್ಥೆ ಮಾಡಿದಲ್ಲಿ ಚಿಲ್ಲರೆ ವ್ಯವಸ್ಥೆ, ಒತ್ತಡಗಳು ಕಡಿಮೆಯಾಗುವುದು. ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಗಲಾಟೆ ಮಾಡಿದರೆ., ಕನ್ನಡಿ ನೋಡಿ ತಲೆ ಬಾಚಿದರೆ, ಬಸ್ ನಿಲ್ದಾಣಗಳಲ್ಲಿ ಅವಾಚ್ಯ ಶಬ್ದಗಳೊಂದಿಗೆ ಬೈಯ್ದಾಡಿದರೆ ಪ್ರಯಾಣಿಕರಲ್ಲಿ ಆತಂಕಗಳು ಹೆಚ್ಚಾಗುತ್ತದೆ. ಒಂದು ನಿಮಿಷದ ಗಲಾಟೆಯಿಂದ ವಿಶ್ವಾಸ- ಸ್ನೇಹ ಕಳೆದುಕೊಳ್ಳದಿರಿ.

ಅಜೆಕಾರು – ಕಾರ್ಕಳ ನಡುವಿನ ಬಸ್ ನಿರ್ವಾಹಕರಿಗೆ ಭಾವಪೂರ್ವಕ ವಿದಾಯವನ್ನು ನಿತ್ಯ ಪ್ರಯಾಣಿಕರು ನಿವೃತ್ತಿ ಸಮಯದಲ್ಲಿ ಅಭಿನಂದನೆ ಮೂಲಕ ಸಲ್ಲಿಸಿದರು. ಇದು ನಿರ್ವಾಹಕ ಪ್ರಯಾಣಿಕರ ಜೊತೆಗೆ ಇಟ್ಟುಕೊಂಡ ಸ್ನೇಹಮಯ ಸಂಬಂಧದಿಂದ ಸಾಧ್ಯವಾಯಿತು. ಇಂತಹ ನಿರ್ವಾಹಕರಿಂದ ಮಾಲೀಕರಿಗೆ ಲಾಭವನ್ನು ತಂದುಕೊಟ್ಟಿದೆ. ನಿರ್ವಾಹಕನ ಉತ್ತಮ ಮಾತುಗಳಿಂದ, ನಗುಮುಖದ ಸೇವೆಯಿಂದ ಉದ್ದಿಮೆ ಆರೋಗ್ಯಯುತವಾಗಿ, ಸ್ನೇಹದಿಂದ ಮುಂದುವರಿಯುವುದು. ಶೇ.80 ಪ್ರಯಾಣಿಕರು ಪ್ರಯಾಣದ ಸಂದರ್ಭ ಮೌನ ಬಯಸುತ್ತಾರೆ. ಟೇಪ್ ರೆಕಾರ್ಡರ್ ಗೆ ಅವಕಾಶ ಕಲ್ಪಿಸಿಕೊಡದಿರಿ.. – ಉಪನ್ಯಾಸಕ, ರಾಷ್ಟ್ರಮಟ್ಟದ ತರಬೇತುದಾರ ರಾಜೇಂದ್ರ ಭಟ್

Advertisement
Advertisement
Previous Post

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್!

Next Post

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಪುತ್ತೂರಿನಲ್ಲಿ ಪ್ರಚಾರ ಅಭಿಯಾನಕ್ಕೆ ಶಾಸಕರಿಂದ ಚಾಲನೆ : ಎರಡೂ ಸ್ಥಾನವನ್ನು ಗೆಲ್ಲಬೇಕಾದಲ್ಲಿ ಕಾರ್ಯಕರ್ತರ ಶ್ರಮ ಅಗತ್ಯ – ಅಶೋಕ್ ರೈ

OtherNews

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!
Featured

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

December 2, 2025
ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!
ಪುತ್ತೂರು

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

December 2, 2025
ದೇವಸ್ಥಾನ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿಗಳ ಬಂಧನ : ರೂ: 5,32,000 ಮೌಲ್ಯದ 76 ಗ್ರಾಂ ಚಿನ್ನಾಭರಣಗಳ ಸ್ವಾಧೀನ…!
Featured

ದೇವಸ್ಥಾನ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿಗಳ ಬಂಧನ : ರೂ: 5,32,000 ಮೌಲ್ಯದ 76 ಗ್ರಾಂ ಚಿನ್ನಾಭರಣಗಳ ಸ್ವಾಧೀನ…!

November 26, 2025
ದ.ಕ ಹಾಗೂ ಉಡುಪಿ ಜಿಲ್ಲಾ ಸೌತ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಜಿಲ್ಲಾಧ್ಯಕ್ಷರಾಗಿ ನವೀನ್ ರೈ ಪಂಜಳ ಆಯ್ಕೆ…!
ಪುತ್ತೂರು

ದ.ಕ ಹಾಗೂ ಉಡುಪಿ ಜಿಲ್ಲಾ ಸೌತ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಜಿಲ್ಲಾಧ್ಯಕ್ಷರಾಗಿ ನವೀನ್ ರೈ ಪಂಜಳ ಆಯ್ಕೆ…!

November 25, 2025
ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!
Featured

ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಇರಿತ..!!

November 24, 2025
ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!
ಮಂಗಳೂರು

ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

November 18, 2025

Leave a Reply Cancel reply

Your email address will not be published. Required fields are marked *

Recent News

(ಜ.10/11) : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ : ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…!

(ಜ.10/11) : ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ : ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…!

December 4, 2025
ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

ಕಳೆಂಜ:(ಡಿ.27/28) ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ…!!

December 4, 2025
ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ ರಸಪ್ರಶ್ನೆ ಸ್ಪರ್ಧೆ…!

December 4, 2025
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!

ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!

December 4, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page