ಪುತ್ತೂರು : ಮಂಗಳೂರಿನ ಜನನಿಬಿಡ ಪ್ರದೇಶದ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಮತ್ತು ಕೋಮು ದ್ವೇಷ ಹರಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಮೇಲೆಯೇ ಕೇಸು ದಾಖಲಿಸಿದ ಪೊಲೀಸ್ ಅಧಿಕಾರಿಗಳ ನಡೆ ಸರಿಯಲ್ಲ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ.
ನಮಾಜ್ ಮಾಡಿದವರ ಮೇಲೆ ಸುಮೋಟೊ ಕೇಸ್ ದಾಖಲಿಸಿದ ಅಧಿಕಾರಿಯನ್ನು ರಜೆಯಲ್ಲಿ ಕಳುಹಿಸಿ ದಾಖಾಲಾದ ಕೇಸನ್ನು ಹಿಂಪಡೆಯಲು ಹುನ್ನಾರ ನಡೆಸಿದ ಕಾಂಗ್ರೆಸ್ ಸರಕಾರ ಹಿಂದೂಗಳಿಗೊಂದು ನ್ಯಾಯ., ಮುಸ್ಲಿಮರಿಗೊಂದು ನ್ಯಾಯ ಮಾಡಿದ್ದು, ಈ ಸರಕಾರದಿಂದ ಬಹುಸಂಖ್ಯಾತರಿಗೆ ನ್ಯಾಯ ಸಿಗುವಂತದ್ದು ಮರೀಚಿಕೆಯಾಗಿದೆ.
ಹಿಂದೂ ಮುಖಂಡ ಶರಣ್ ಪಂಪ್ವೆಲ್ ಮೇಲೆ ದಾಖಲು ಮಾಡಿರುವ ಕೇಸನ್ನು ಕೂಡಲೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.