ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿದರು.

ಭೇಟಿಯ ವೇಳೆ ಸುಳ್ಯ ಕ್ಷೇತ್ರದ ಹಲವೆಡೆ ಸಾರ್ವಜನಿಕರು ಅನುಭವಿಸುತ್ತಿರುವ ಬಿಎಸ್ಎನ್ಎಲ್ ನೆಟ್ವರ್ಕ್ನ ಸಮಸ್ಯೆ ಮತ್ತು ಉಚ್ಚಿಲದ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಯ ಕುರಿತು ಸಂಸದರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೈಗೊಳ್ಳಬಹುದಾದ ಸೂಕ್ತ ಪರಿಹಾರ ಕಾರ್ಯದ ಕುರಿತು ಚರ್ಚಿಸಿದರು.
