ಉಪ್ಪಿನಂಗಡಿ : ಮಹಿಳೆಯೋರ್ವರು ಮೃತಪಟ್ಟ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ನಲ್ಲಿ ನಡೆದಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಹೇಮಾವತಿ (37) ಮೃತ ಮಹಿಳೆ.

ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ ಎನ್ನಲಾಗಿದೆ.
ಮೊದಲಿಗೆ ಹೃದಯಾಘಾತವೆಂಬ ಸುದ್ದಿ ಹರಡಿದ್ದು, ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಪೊಲೀಸರು ವಿಚಾರಣೆಗಾಗಿ ಹೇಮಾವತಿ ಅಕ್ಕನ ಮಗ ಹಾಗೂ ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.