ಕೇರಳ : ಸಾಕಾನೆಯೊಂದು ಮಾವುತನನ್ನು ತುಳಿದು ಭೀಕರವಾಗಿ ಕೊಂದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಂದಹಾಗೆಯೇ ಈ ದುರ್ಘಟನೆ ದೇವರನಾಡು ಕೇರಳದಲ್ಲಿ ನಡೆದಿದೆ.
ಜೂನ್ 20 ಗುರುವಾರ ಈ ಘಟನೆ ನಡೆದಿದ್ದು, ಬೆಚ್ಚಿಬೀಳಿಸುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ.
ಸೊಂಡಿಲಿನಿಂದ ಬೀಳಿಸಿ, ಎರಡು ಕಾಲುಗಳನ್ನು ಆತನ ಮೇಲಿಟ್ಟು ನಿರ್ದಯವಾಗಿ ಮಾವುತನನ್ನು ಕೊಂದಿರುವ ಎಲ್ಲಾ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.
ವರದಿ ಪ್ರಕಾರ, ಇಡುಕ್ಕಿಯ ಸಫಾರಿ ಕೇಂದ್ರದಲ್ಲಿ ಆನೆಗಳನ್ನು ಅಕ್ರಮವಾಗಿ ಸಾಕಲಾಗುತ್ತಿದೆ. ಈ ಸಂಬಂಧ ಅರಣ್ಯ ಇಲಾಖೆ ಪ್ರಕರಣವನ್ನು ದಾಖಲಿಸಿಕೊಂಡಿದೆ. ಮಾವುತನ ಸಾವಿನ ಬಳಿಕ ಸಫಾರಿ ಕೇಂದ್ರಕ್ಕೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ.
ಮೃತ ಮಾವುತನನ್ನು 62 ವರ್ಷದ ಬಾಲಕೃಷ್ಣ ಎಂದು ಗುರುತಿಸಲಾಗಿದೆ.
ಮರಣೋತ್ತರ ಶವ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.