ಪರಶುರಾಮನ ನಕಲಿ ಮೂರ್ತಿ ಮಾಡಿ ಸರಬರಾಜು ಮಾಡಿದ ಆರೋಪದ ಮೇರೆಗೆ ಕೃಷ್ಣ ಕಲಾ ಆರ್ಟ್ಸ್ ನ ಮಾಲಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳದ ನಲ್ಲೂರು ಗ್ರಾಮದ ನಿವಾಸಿ ಕೃಷ್ಣ (30) ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಆರೋಪಿಗಳು ಉಡುಪಿ ನಿರ್ಮಿತಿ ಕೇಂದ್ರದಿಂದ ಪ್ರತಿಮೆ ರಚನೆ ಮತ್ತು ಪ್ರತಿಷ್ಠಾಪನೆಗಾಗಿ 1,25,50,000 ರೂ. ಆದರೆ, ಆರೋಪಿಗಳು ಅಸಲಿ ಕಂಚಿನ ಪರಶುರಾಮ ಪ್ರತಿಮೆ ನೀಡುವ ಬದಲು ನಕಲಿ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.




























