ನವದೆಹಲಿ : ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೋವಾಲ್ ಅವರನ್ನು ದೆಹಲಿಯ ನಿವಾಸದಲ್ಲಿ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತುಕತೆ ನಡೆಸಿದರು.

ಎನ್.ಎಮ್.ಪಿ.ಎ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು ಮತ್ತು ಸಾಗರ್ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಬಂದರು ಸಚಿವರ ಜೊತೆ ಚರ್ಚಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳ ಪ್ರಗತಿ, ಸಮಸ್ಯೆ ಮತ್ತು ಸಾಧ್ಯತೆಗಳ ಕುರಿತು ರೈಲ್ವೆ ಖಾತೆಯ ರಾಜ್ಯ ಸಚಿವರ ಜೊತೆ ಚರ್ಚೆ ನಡೆಸಿದರು.



























