ಮಂಗಳೂರು : ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ರವಿವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ನ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್. ರಾಹುಲ್ ಹಾಗೂ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.

ಕತ್ರಿನಾ ಕೈಫ್, ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಮ್ಯಾಟ್ರಿಕ್ಸ್ ಎಂಟರ್ಟೈನ್ಮೆಂಟ್ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸಹಿತ 9 ಮಂದಿಯ ಕೋಲವನ್ನು ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ನಿನ್ನೆ ವಿಕ್ಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.
ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ರೇಷ್ಮಾ ಮತ್ತು ಆಧ್ಯಾ ಅವರು ದೈವಸ್ಥಾನದ ಕಚೇರಿಯಲ್ಲೇ ಉಳಿದರು ಹಾಗೂ ಹೊರಗಿನಿಂದಲೇ ಕೋಲವನ್ನು ವೀಕ್ಷಿಸಿದರು.
ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ದೈವಸ್ಥಾನದ ಆಡಳಿತ ಮಂಡಳಿಯಲ್ಲಿ ಕೋರಿಕೊಂಡಿದ್ದರು.
ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ. ಸುನೀಲ್ ಶೆಟ್ಟಿ ಅವರು ಮಂಗಳೂರು ಮೂಲದವರು. ಅವರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಾರೆ.
ಕೊರಗಜ್ಜನ ಕುರಿತು ಬಾಲಿವುಡ್ ಮಂದಿಗೆ ವಿಶೇಷ ನಂಬಿಕೆ ಇದೆ. ಇದಕ್ಕೆ ಕಾರಣ ಆಗಿರೋದು ಬಾಲಿವುಡ್ ನಲ್ಲಿರುವ ಕರಾವಳಿ ಮೂಲದವರು.