ಮಂಗಳೂರು : ವಿದ್ಯುತ್ ಕಂಬ ಏರಿದ ಹೆಬ್ಬಾವೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಸಂಭವಿಸಿದೆ.
ವಿದ್ಯುತ್ ಕಂಬ ಏರಿದ ಹೆಬ್ಬಾವು ತಂತಿಗಳು ಸ್ಪರ್ಶಿಸುತ್ತಿದ್ದಂತೆ ಮೃತಪಟ್ಟಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಾಹಿತಿ ತಿಳಿದ ಮೆಸ್ಕಾಂ ಸಿಬ್ಬಂದಿ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಹೆಬ್ಬಾವಿನ ತೆರವು ಕಾರ್ಯಾಚರಣೆ ನಡೆಸಿದರು.