ಮಂಗಳೂರು : ಭಾರೀ ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ.

ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ.
ಶೈಲೇಶ್ ಜೋಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ.
ನಿನ್ನೆ ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಮನೆಯ ಪಕ್ಕದ ತಡೆಗೋಡೆ ಕುಸಿದು ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.