ಮಂಗಳೂರು : ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ನಗರದ ವೆಲೆನ್ಸಿಯಾದಲ್ಲಿ ಐವನ್ ಡಿಸೋಜ ಮನೆಯಿದ್ದು, ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.
ಐವನ್ರ ಮನೆಯ ಕಿಟಕಿಯ ಫ್ರೇಮ್ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.
ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದ್ದಾರೆ.



























