ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು.
ಅಬ್ದುಲ್ ಹಮೀದ್ ಹನೀಫಿ ದುವಾ ನೆರವೇರಿಸಿದರು.
ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಎಲ್.ಟಿ. ಅಬ್ದುಲ್ ರಜಾಕ್ ಹಾಜಿಯವರು ಮಾಡಾವು ಸಂತೋಷ್ ಗ್ರೂಪ್ಸ್ ನ ಹುಸೈನಾರ್ ಹಾಜಿಯವರಿಗೆ ಧ್ವಜ ಹಸ್ತಾಂತರ ಮಾಡುವ ಮೂಲಕ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು.
ಜಾಥಾ ನಡೆಯುತ್ತಿದ್ದ ವೇಳೆ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ಜಾಥಾದಲ್ಲಿ ತುಸುದೂರ ಹೆಜ್ಜೆ ಹಾಕಿದರು. ಬಳಿಕ ದರ್ಬೆ ಚಾರಿಟೇಬಲ್ ಟ್ರಸ್ಟ್ ನವರ ಜೊತೆ ಹಾಗೂ ಪುತ್ತೂರು ಗಾಂಧಿಕಟ್ಟೆ ಬಳಿ ಯುವಕರ ತಂಡದೊಂದಿಗೆ ಸೇರಿದ್ದವರಿಗೆ ಸಿಹಿ ವಿತರಿಸಿದರು.