ಪುತ್ತೂರು : ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸರ್ವೆಯಲ್ಲಿ ನಡೆದಿದೆ.
ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಸೋಂಪಾಡಿ ನಿವಾಸಿ ವರುಣ್ ಎಂಬುವರು ಚಲಾಯಿಸುತ್ತಿದ್ದ ಬೈಕ್ ಮತ್ತು ವಿರುದ್ಧ ದಿಕ್ಕಿನಿಂದ ಸರ್ವೆ ದೋಳಗೊತ್ತು ನಿವಾಸಿ ಶಶಿಧರ್ ಎಸ್.ಡಿ ಎಂಬವರು ಚಲಾಯಿಸಿದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ.
ಘಟನೆಯಿಂದ ಬೈಕ್ ಸವಾರಿಬ್ಬರಿಗೂ ಗಾಯವಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಗಳಿಗೂ ಹಾನಿ ಉಂಟಾಗಿದೆ. ಅಪಘಾತ ಸಂಭವಿಸಿದ ವೇಳೆ ಸ್ಥಳೀಯ ರಿಕ್ಷಾ ಚಾಲಕರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು ಎಂದು ತಿಳಿದು ಬಂದಿದೆ.