ಪುತ್ತೂರು : 2024-25ನೇ ಸಾಲಿನ ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಎಸ್ ಡಿ ಯಂ ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳಾದ
ಅಜಯ್ ಕೃಷ್ಣ, ತುಷಾರ್, ಅಭೀಶ್ ರೈ ಪೃಥ್ವಿ ಕೃಷ್ಣ ,ಧನ್ವಿನ್ ಇವರುಗಳು ತೃತೀಯ ಸ್ಥಾನ ಹಾಗೂ ಭುವನ್ ಕರಂದ್ಲಾಜೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಕರಾಟೆ ಶಿಕ್ಷಕರಾದ ನಾರಾಯಣ ಆಚಾರ್ಯ ಮಳಿ ತರಬೇತಿ ನೀಡಿದ್ದು, ಶಾಲಾ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.