ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಮಾರ ಪರ್ವತ ಚಾರಣ ಪಥವು ಅ.3 (ಗುರುವಾರ)ರಂದು ಮರು ಪ್ರಾರಂಭವಾಗಲಿದೆ.
ಜ. 26 ಹಾಗೂ 27ರಂದು ಮಿತಿಗೂ ಮೀರಿದ ಚಾರಣಿಗರು ಆಗಮಿಸಿದ್ದ ಕಾರಣ ಜನದಟ್ಟಣೆ ಉಂಟಾಗಿತ್ತು. ಆದ್ದರಿಂದ, ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಫೆ.1ರಿಂದ ಚಾರಣ ಪಥವನ್ನು ಸ್ಥಗಿತಗೊಳಿಸಲಾಗಿತ್ತು.