ವಿಜಯನಗರ : ಟ್ರ್ಯಾಕ್ಟರ್ ಮೇಲಿಂದ ಆಯತಪ್ಪಿ ಬಿದ್ದು ಮಗು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಜಿಟ್ಟಿನಕಟ್ಟೆ ಗ್ರಾಮದಲ್ಲಿ ನಡೆದಿದೆ.
ವಕೀಲ ಸಿದ್ದನ ಗೌಡ ಹಾಗೂ ಸವಿತಾ ಗೌಡ ದಂಪತಿ ಪುತ್ರಿ ದಿಶಾಗೌಡ (6) ಮೃತಪಟ್ಟ ಬಾಲಕಿ.
ಮನೆ ಮುಂದೆ ನಿಂತಿದ್ದ ಟ್ರ್ಯಾಕ್ಟರ್ ಮೇಲೆ ಆಟ ಆಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ. ದಾವಣಗೆರೆಯಲ್ಲಿ ನೆಲೆಸಿದ್ದ ಅವರು, ಅಮವಾಸ್ಯೆ ಹಿನ್ನಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ್ದರು.
ಅಮವಾಸ್ಯೆ ಪೂಜೆ ಸಲ್ಲಿಸಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮೇಲೆ ದಿಶಾಗೌಡ ಆಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆ. ತಕ್ಷಣ ಹರಪನಹಳ್ಳಿ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮಗು ಮೃತಪಟ್ಟಿದೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.