ಕಡಬ : ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬದ ಹೊಸಮಠ ಸೇತುವೆಯ ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು, ಎರಡೂ ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.
ಸುಬ್ರಹ್ಮಣ್ಯದ ಕುಲ್ಕುಂದ ನಿವಾಸಿ ಚೇತನ್ ಅವರು ಉಪ್ಪಿನಂಗಡಿ ಕಡೆಯಿಂದ ಚಲಾಯಿಸಿಕೊಂಡು ಬಂದ ಕಾರು, ಬಲ್ಯ ಗ್ರಾಮದ ಬೀರುಕ್ಕು ನಿವಾಸಿ ಹರಿಶ್ಚಂದ್ರ ಅವರು ಚಲಾಯಿಸಿಕೊಂಡು ಹೊಸಮಠ ಪೇಟೆಯಿಂದ ಮನೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಎರಡೂ ಕಾರುಗಳು ನಜ್ಜುಗುಜ್ಜಾಗಿ ಪಕ್ಕದ ಚರಂಡಿಗೆ ಬಿದ್ದಿವೆ. ಚೇತನ್ ಅವರ ಕಾರಿನಲ್ಲಿದ್ದ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದುತಿಳಿದು ಬಂದಿದೆ.
ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.