ಮಂಗಳೂರು : ಬಿಲ್ಲವ ಸಮಾಜದ ಯುವತಿಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದಾಗಿ ಆರೋಪಿಸಿ ಹಿಂದು ಜಾಗರಣ ವೇದಿಕೆ ವತಿಯಿಂದ ಕಾಣಿಯೂರಿನ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ಧ ದೂರು ನೀಡಲಾಗಿದೆ.
‘ಬಿಲ್ಲವ ಸಮಾಜದ 1ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು’ ಎಂದು ಅರಣ್ಯಾಧಿಕಾರಿಯಾಗಿ ಪಂಜದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂಜೀವ ಪೂಜಾರಿ ಎಂಬವರು ಹಿಂದೂ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯಾಧಿಕಾರಿಯವರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.