ಸುಳ್ಯ : ಕಡಬದಿಂದ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಸುಳ್ಯದ ಮೊಗರ್ಪಣೆ ಮಸೀದಿ ಬಳಿ ತಡೆದ ಘಟನೆ ನಡೆದಿದೆ.
ದೋಸ್ತ್ ವಾಹನ ಮಾತ್ರವಲ್ಲದೆ ವಾಹನದಲ್ಲಿದ್ದ ವ್ಯಕ್ತಿಗಳನ್ನು ಹಿಂದು ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ವಾಹನದಲ್ಲಿದ್ದವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದು, ವಾಹನದಲ್ಲಿ ಎರಡಕ್ಕೂ ಹೆಚ್ಚು ಜಾನುವಾರುಗಳಿದ್ದು, ಅದನ್ನು ಪರವಾನಗಿ ಇಲ್ಲದೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.