ಸುಬ್ರಹ್ಮಣ್ಯ : ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರ ಮನೆಯಿಂದ 12 ಲಕ್ಷ ರೂ. ಮತ್ತು ಅಂದಾಜು 28 ಪವನ್ ಚಿನ್ನ ಕಳ್ಳತನವಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಅಕ್ಕೇಣಿ ಸುಂದರ ಗೌಡ ರವರು ಕುಟುಂಬದೊಂದಿಗೆ ಸಂಜೆ ಮನೆಗೆ ಬೀಗ ಹಾಕಿ ಮಗಳ ಮನೆ ಪೆರಿಗೇರಿಗೆ ಹೋಗಿದ್ದರು. ನಿನ್ನೆ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ನೋಡಿದಾಗ 12 ಲಕ್ಷ ರೂ. ಮತ್ತು 28 ಪವನ್ ಚಿನ್ನ ಕಾಣೆಯಾಗಿರುವುದು ಗೊತ್ತಾಗಿದೆ. ಕರಿಮಣಿ ಸರವೊಂದರ ತಾಳಿಯನ್ನು ಬಿಚ್ಚಿಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.