ಮಂಗಳೂರು: ಸೈಬರ್ ವಂಚಕರಿಗೆ ದುಬೈ ಸಿಮ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸೆನ್ ಕ್ರೈಂ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಒಡಿಶಾ ಮೂಲದ ವಾಸುದೇವ ರೆಡ್ಡಿ ಬಂಧಿತ ಆರೋಪಿ.
ಶೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಗೆ ಲಿಂಕ್ ಕಳುಹಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಓರ್ವನನ್ನು ಬಂಧಿಸಿದ್ದು ವಿಚಾರಣೆ ನಡೆಸಿದಾಗ ಸಿಮ್ ಮಾರಾಟದ ವ್ಯಕ್ತಿಯ ಮಾಹಿತಿ ನೀಡಿದ್ದಾನೆ.
ಬಳಿಕ ಪೊಲೀಸರು ವಾಸುದೇವ ರೆಡ್ಡಿ ಎಂಬಾತನನ್ನು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.