ಮಂಗಳೂರು:ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ ದಾಳಿಯಲ್ಲಿ ಮಂಗಳೂರಿನಲ್ಲಿ ಬಾಂಗ್ಲಾದೇಶಿಯೊಬ್ಬನನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಜಂಟಿ ಕಾರ್ಯಾಚರಣೆ ಮೂಲಕ 25 ವರ್ಷದ ಅನರುಲ್ ಶೇಕ್ ಎಂಬಾತನನ್ನು ಬಂಧಿಸಲಾಗಿದೆ.
ಕಟ್ಟಡ ಕಾರ್ಮಿಕನಾಗಿ ತಲೆಮರೆಸಿಕೊಂಡಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು ಎಂದು ತಿಳಿದು ಬಂದಿದೆ. ಮೂರು ವರ್ಷಗಳ ಹಿಂದೆ ಇಂಡೋ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಒಳ ನುಸುಳಿದ್ದ ಅನರುಲ್ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಕ್ಕೆ ಪ್ರವೇಶಿಸಿದ್ದ.
ಮೊದಲು ಉಡುಪಿಗೆ ಬಂದು ನೆಲೆಸಿದ್ದ ಈತ. ನಂತರ ಅಲ್ಲಿ ಇಲ್ಲಿ ಕೆಲಸ ಮಾಡಿಕೊಂಡು ಇದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಅನರುಲ್ ಶೇಕ್ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.