ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರ ಮೇಲೆ ಫೆ. 4ರ ಮಂಗಳವಾರ ಅನಂತಾಡಿಯಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದೆ.
ಯಾವ ಕಾರಣಕ್ಕೆ ಫೈರಿಂಗ್ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಚಿತ್ತರಂಜನ್ ಶೆಟ್ಟಿ ಅನಂತಾಡಿಗೆ ಯಾಕೆ ಹೋಗಿದ್ದರು ಎಂಬ ವಿಚಾರವೂ ತಿಳಿದು ಬಂದಿಲ್ಲ.
ಮಿಸ್ ಫೈಯರ್ ಎಂಬ ಮಾಹಿತಿ ಇದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ಅವರೇ ಹೋಗಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.