ಪುತ್ತೂರು: ಕುಂಬ್ರ ಮೂರ್ತೆದಾರರ
ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಒಳಮೊಗ್ರು ಗ್ರಾಮದ ಶಾಂತಿವನ ನಾರಾಯಣ ಎಂ.ಎಸ್
ಮತ್ತು ಪ್ರೇಮ ಅವರ ಪುತ್ರರಾಗಿರುವ ಚಂದ್ರಕಾಂತ್ ಶಾಂತಿವನ ರವರು ಧಾರ್ಮಿಕ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ತಂದೆ, ತಾಯಿ ಹಾಗೂ ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ.

























