ವಿಟ್ಲ: ಕಲ್ಲಿನ ಕೋರೆಯಲ್ಲಿ ಬಾರಿ ಪ್ರಮಾಣದ ಸ್ಪೋಟ ಸಂಭವಿಸಿದ್ದು ಸ್ಫೋಟದ ಸದ್ದಿಗೆ ವಿಟ್ಲದ ಜನತೆ ಬೆಚ್ಚಿ ಬಿದ್ದ ಘಟನೆ ನಡೆದಿದೆ.
ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ ಭಾರೀ ಪ್ರಮಾಣದಲ್ಲಿ ಶಬ್ದ ಕೇಳಿದೆ. ಇದನ್ನು ಗಮನಿಸಿದ ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು.
ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆ ಪರಿಣಾಮ ಹಲವು ಮನೆಗಳಿಗೆ ಹಾನಿಯುಂಟಾಗಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು, ಎಸ್ಪಿ ಹಾಗೂ ಇತರ ಹಲವು ಅಧಿಕಾರಿಗಳು ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿದ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ್ ಶೆಟ್ಟಿ ಉಜಿರೆಮಾರ್ ರನ್ನು ಸ್ಥಳೀಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.