ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅದರಲ್ಲಿ ಗೋಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದಾದ ಬಳಿಕ ಸ್ಥಳಕ್ಕೆ ಬಂದ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆ.ಜಿಗೂ ಅಧಿಕ ಗೋ ಮಾಂಸ ಇರುವುದು ಕಂಡುಬಂದಿದ್ದು, ಗೋಮಾಂಸ ಹಾಗೂ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.